Bible Language Cross References for the verse Genesis 14:0 in KNV
- 1 ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
- 2 ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- 3 ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
- 4 ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
- 5 ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
- 6 ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- 7 ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
- 8 ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
- 9 ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
- 10 ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
- 11 ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
- 12 ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
- 13 ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
- 14 ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
- 15 ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- 16 ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
- 17 ಹಿವ್ವಿಯನೂ ಅರ್ಕಿಯನೂ ಸೀನಿಯನೂ
- 18 ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
- 19 ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- 20 ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
- 21 ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
- 22 ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- 23 ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ.
- 24 ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
- 25 ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್.
- 26 ಯೊಕ್ತಾನನಿಂದ ಅಲ್ಮೋದಾದನೂ ಶೆಲೆಪನೂ ಹಚರ್ಮಾವೆತನೂ ಯೆರಹನೂ
- 27 ಹದೋರಾಮನೂ ಊಜಾಲನೂ ದಿಕ್ಲಾನನೂ
- 28 ಓಬಾಲನೂ ಅಬೀಮಯೇಲನೂ ಶೆಬನೂ
- 29 ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
- 30 ಅವರ ನಿವಾಸವು ಮೇಶಾದಿಂದ ಪೂರ್ವದಿಕ್ಕಿನ ಬೆಟ್ಟವಾಗಿರುವ ಸೆಫಾರಿನ ವರೆಗೆ ಇತ್ತು.
- 31 ಇವರೇ ತಮ್ಮ ಕುಟುಂಬಗಳ ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿ ತಮ್ಮ ಜನಾಂಗಗಳ ಪ್ರಕಾರ ಶೇಮನ ಕುಮಾರರು.
- 32 ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
- 1 ದಾವೀದನು ತನ್ನ ಸಂಗಡಲಿರುವ ಜನರನ್ನು ಲೆಕ್ಕಮಾಡಿ ಅವರ ಮೇಲೆ ಸಾವಿರ ಗಳಿಗೂ ನೂರುಗಳಿಗೂ ಅಧಿಪತಿಗಳನ್ನು ನೇಮಿಸಿ ದನು.
- 2 ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
- 3 ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
- 4 ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
- 5 ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
- 6 ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
- 7 ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
- 8 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
- 9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- 10 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
- 11 ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
- 12 ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
- 13 ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
- 14 ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
- 15 ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
- 16 ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
- 17 ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
- 18 ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
- 19 ಆಗ ಚಾದೋಕನ ಮಗನಾದ ಅಹೀಮಾಚನುಕರ್ತನು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾನೆಂಬ ವರ್ತಮಾನಗಳನ್ನು ಅರಸನಿಗೆ ತಿಳಿ ಸುವ ಹಾಗೆ ನಾನು ಓಡಿಹೋಗುವದಕ್ಕೆ ಅಪ್ಪಣೆಯಾಗ ಬೇಕು ಅಂದನು.
- 20 ಯೋವಾಬನು ಅವನಿಗೆ--ನೀನು ಈ ಹೊತ್ತು ವರ್ತಮಾನ ತಕ್ಕೊಂಡು ಹೋಗಬೇಡ; ಮತ್ತೊಂದು ದಿವಸ ವರ್ತಮಾನ ತಕ್ಕೊಂಡು ಹೋಗ ಬಹುದು. ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತಕ್ಕೊಂಡು ಹೋಗ ಬೇಡ ಅಂದನು.
- 21 ಯೋವಾಬನು ಕೂಷ್ಯನಿಗೆ--ನೀನು ಹೋಗಿ ನೋಡಿದ್ದನ್ನು ಅರಸನಿಗೆ ತಿಳಿಸು ಅಂದನು.
- 22 ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
- 23 ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.
- 24 ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
- 25 ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
- 26 ಅವನು ಬಂದು ಸವಿಾಪಿಸಿದನು. ಕಾವ ಲುಗಾರನು ಬೇರೊಬ್ಬನು ಓಡಿ ಬರುವದನ್ನು ಕಂಡು ಬಾಗಲು ಕಾಯುವವನನ್ನು ಕರೆದು--ಇಗೋ, ಮತ್ತೊ ಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ ಅಂದನು.
- 27 ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
- 28 ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 29 ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
- 30 ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
- 31 ಕೂಷ್ಯನು--ಅರಸ ನಾದ ನನ್ನ ಯಜಮಾನನಿಗೆ ವರ್ತಮಾನ ಉಂಟು. ಏನಂದರೆ, ಕರ್ತನು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು ಎಲ್ಲರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾನೆ ಅಂದನು.
- 32 ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.
- 33 ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- 1 ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- 2 ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- 3 ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- 4 ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- 5 ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- 6 ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
- 7 ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
- 8 ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.
- 9 ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- 10 ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- 11 ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- 12 ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- 13 ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- 14 ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
- 15 ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.
- 16 ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.