Bible Versions
Bible Books

Jeremiah 28 (KNV) Kannadam Old BSI Version

1 ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
2 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
3 ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
4 ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
5 ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
6 ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್‌: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಸ್ಥಳಕ್ಕೆ ಬರಮಾಡಲಿ.
7 ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ವಾಕ್ಯವನ್ನು ಕೇಳು.
8 ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
9 ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
12 ಆಗ ಪ್ರವಾದಿಯಾದ ಹನನ್ಯನು ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
13 ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.
14 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
15 ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
16 ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.
17 ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
18 ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
19 ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
20 ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ,
21 ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
22 ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
23 ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
24 ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
25 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
26 ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
28 ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
29 ಆಗ ಯಾಜಕ ನಾದ ಚೆಫನ್ಯನು ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
30 ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
31 ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
32 ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×