Bible Versions
Bible Books

Jeremiah 41 (KNV) Kannadam Old BSI Version

1 ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
2 ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
5 ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
6 ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
7 ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
8 ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
10 ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
11 ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
12 ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
13 ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
16 ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
17 ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.
18 ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
19 ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
20 ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
21 ನಾನು ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
22 ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×